1
1

ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಹೆಸರು ಮಾಡಿರುವ ಆರ್. ಚಂದ್ರು ಸದ್ಯ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೇಶವಾರ ಎಂಬ ಹಳ್ಳಿಯಲ್ಲಿ ರೈತ ಕುಟುಂಬದಲ್ಲಿ ಜನಿಸಿದ ಚಂದ್ರು 20 ವರ್ಷಗಳ ಹಿಂದೆ 100ರೂ ಇಟ್ಟುಕೊಂಡು ಬೆಂಗಳೂರಿಗೆ ಬಂದವರು ಇವರು. ರೈಟರ್ ಆಗಿ ಚಿತ್ರರಂಗದಲ್ಲಿ ವೃತ್ತಿ ಪ್ರಾರಂಭ ಮಾಡಿದ ಆರ್.ಚಂದ್ರು ನಿರ್ದೇಶನಾಗಿ ಹಾಗೂ ನಿರ್ಮಾಪಕನಾಗಿ ಮೈಲುಗಲ್ಲು ಸೃಷ್ಟಿಸಿದ್ದಾರೆ.
ಬರೀ ಸಿನಿಮಾ ಮಾತ್ರವಲ್ಲದೆ, ಸಮಾಜ ಸೇವೆಯಲ್ಲೂ ತಮ್ಮನ್ನ ತಾವು ತೊಡಗಿಸಿಕೊಂಡಿದ್ದಾರೆ. ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಹಳ್ಳಿ ಹಳ್ಳಿಗೂ ಚಂದ್ರು ಪರಿಚಯ. ಎತ್ತಿನ ಹೊಳೆ ಯೋಜನೆ ಹೋರಾಟ ಸೇರಿದಂತೆ ಹಲವು ಅಭಿವೃದ್ಧಿಪರ ಹೋರಾಟದಲ್ಲಿ ಭಾಗಿಯಾಗಿದ್ದ ಚಂದ್ರು ಶಿಕ್ಷಣ ಹಾಗೂ ಧಾರ್ಮಿಕವಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಿನಿಮಾ ಜೊತೆ ಜೊತೆಗೆ ಚಂದ್ರು ಶಿಕ್ಷಣ, ಸಾಹಿತ್ಯ ಹಾಗೂ ಸಮಾಜ ಸೇವೆಗಾಗಿ ಮಣಿಪುರ ಅಂತರಾಷ್ಟ್ರೀಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
Subscribe to get the latest posts sent to your email.