ಶ್ರೀಗಂಧ ಮರಗಳ್ಳರ ಬಂಧನ ಆರೋಪಿತರಿಂದ 8,75,00 ರೂ.ಮೌಲ್ಯದ ಸ್ವತ್ತು ಜಪ್ತಿ

ಶ್ರೀಗಂಧ ಮರಗಳ್ಳರ ಬಂಧನ ಆರೋಪಿತರಿಂದ 8,75,00 ರೂ.ಮೌಲ್ಯದ ಸ್ವತ್ತು ಜಪ್ತಿ
Kaliyugadkoogu
8 / 100
ಬೀದರ, ಜುಲೈ 31 – ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಜಿಲ್ಲೆಯಲ್ಲಿ ವಿವಿಧ ಠಾಣೆಗಳಲ್ಲಿ ಹಾಗೂ ಅರಣ್ಯ ಇಲಾಖೆಯಲ್ಲಿ ದಾಖಲಾದ ಶ್ರೀಗಂಧ ಮರಗಳ ಕಳ್ಳತನ ಪ್ರಕಟಣಕ್ಕೆ ಸಂಬAಧಿಸಿದAತೆ ಮೂರು ಜನ ಆರೋಪಿತರನ್ನು ಬಂಧಿಸಿ ಆರೋಪಿತರಿಂದ 8,75,000 ರೂ. ಮೌಲ್ಯದ ವಿವಿಧ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಚೆನ್ನಬಸವಣ್ಣ ಎಸ್.ಎಲ್. ಹೇಳಿದರು.
ಅವರು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಭಾಲ್ಕಿ ಅಂಬೆಸಾAಗಾವಿ ಗ್ರಾಮದ ಸೂರಜಸಿಂಗ ಕನ್ನುಸಿಂಗ ರಾಜಪೂತ ಎನ್ನುವರ ಜಮೀನಿನಲ್ಲಿ ಶ್ರೀಗಂಧ ಮರಗಳ ಕಳ್ಳತನ ಸೇರಿ ಎರಡು ಪ್ರಕರಣ ಹಾಗೂ ಬೀದರ ಜಿಲ್ಲಾ ಅರಣ್ಯ ಇಲಾಖೆಯ ಕಛೇರಿ ಆವರಣದಲ್ಲಿ ಕಳ್ಳತನವಾದ ಮೂರು ಶ್ರೀಗಂಧ ಮರಗಳ ಕಳ್ಳತನ ಪ್ರಕರಣದಲ್ಲಿ ಈ ಆರೋಪಿಗಳು ಭಾಗಿಯಾಗಿದ್ದರು.
ಸದರಿ ಆರೋಪಿತರಿಂದ ಒಂದು ಹೊಂಡಾಯಿ ಕ್ರೀಟಾ ಕಾರ ಇದರ ಮೌಲ್ಯ 5,00,000 ರೂ., ಒಂದು ಹೊಂಡಾ ಮೋಟಾರ ಸೈಕಲ್ ಮೌಲ್ಯ 45,000 ರೂ., ಗರಗಸ ಹಾಗೂ ಮೂರು ಮೊಬೈಲ್ ಸೇರಿ ಒಟ್ಟು 8,75,000 ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಪ್ರಕರಣದಲ್ಲಿ ಒಟ್ಟು 09 ಜನ ಆರೋಪಿಗಳಿದ್ದು, 03 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, 06 ಜನ ಆರೋಪಿಗಳು ತಪ್ಪಿಸಿಕೊಂಡಿದ್ದು ಇವರ ಬಂಧನಕ್ಕೆ ಬಲೆಬಿಸಲಾಗಿದೆ. ಆರೋಪಿತರು ಶ್ರೀಗಂಧದ ಮರಗಳನ್ನು ಕಡೆದು ನೆರೆಯ ತೆಲಂಗಾಣ ರಾಜ್ಯದ ವಿಕಾರಬಾದ ಜಿಲ್ಲೆಯ ಓರ್ವ ವ್ಯಕ್ತಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಆತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗುವುದು.
ಬೀದರ ಮಾರ್ಕೆಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022ನೇ ಆಗಸ್ಟ್ 6 ರಂದು ಬೀದರ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ನಿಲ್ಲಿಸಿದ ದ್ವಿಚಕ್ರವಾಹನ ಕಳ್ಳತನ ಪ್ರಕರಣಕ್ಕೆ ಸಂಬAಧಿಸಿದAತೆ ಬೀದರ ಚೆಟ್ಟನಳ್ಳಿ ಗ್ರಾಮದ ವೀರಶೆಟ್ಟಿ ಶಾಮರಾವ ಮುದ್ದಪ್ಪಾ ಎನ್ನುವ ಆರೋಪಿಯನ್ನು ಬಂಧಿಸಿ 45000 ರೂ. ಮೌಲ್ಯದ ದ್ವಿಚಕ್ರವಾಹನ ಜಪ್ತಿ ಮಾಡಿಕೊಳ್ಳಲಾಗಿದೆ ಹಾಗೂ ನೂತನ ನಗರ ಠಾಣೆ ವ್ಯಾಪ್ತಿಯಲ್ಲಿ 2023ನೇ ಜುಲೈ 26 ರಂದು ಬೀದರ ನಗರದ ಗುರುನಾನಕ ಕಾಲೋನಿಯಲ್ಲಿ ಮನೆಯ ಮುಂದಿನಿAದ ಬ್ಯಾಟರಿ ಕಳ್ಳತನಕ್ಕೆ ಸಂಬAಧಿಸಿದAತೆ 03 ಆರೋಪಿತರನ್ನು ವಿಚಾರಣೆಗೊಳಪಡಿಸಿದಾಗ ಕಳವು ಮಾಲು ಸ್ವೀಕರಿಸಿದ ಸ್ಕಾçö್ಯಪ ಅಂಗಡಿ ಮಾಲೀಕರಿಂದ ಎಮರಾನ ಕಂಪನಿಯ ಬ್ಯಾಟರಿ ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಆಟೋ ರಿಕ್ಷಾ ಸೇರಿ ಒಟ್ಟು 1,72,000 ರೂ.ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿರುತ್ತದೆ ಎಂದು ಹೇಳಿದರು.
ಬೀದರ ಜಿಲ್ಲಾ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎA. ಅವರು ಮಾತನಾಡಿ, ಜಿಲ್ಲೆಯಲ್ಲಿ ಇತ್ತೀಚಿಗೆ ಶ್ರೀಗಂಧದ ಮರಗಳ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಆರೋಪಿತರ ಪತ್ತೆಗೆ ಸಾರ್ವಜನಿಕರು ಸಹಕರಿಸಬೇಕು ಹಾಗೂ ರೈತರು ತಮ್ಮ ಹೊಲದಲ್ಲಿ ಈ ರೀತಿಯ ಶ್ರೀಗಂಧ ಮರಗಳ ಕಳ್ಳತನ ನಡೆದರೆ ಪೊಲೀಸ್ ಇಲಾಖೆ ಅಥವಾ ಅರಣ್ಯ ಇಲಾಖೆಗೆ ಮಾಹಿತಿ ನೀಡಿ.
ಕಳೆದ ಶ್ರೀಗಂಧ ಮರಗಳ ಕಳ್ಳತನ ಪ್ರಕರಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು, ಯುವಕರು ಸಹ ಇಂತಹ ಪ್ರಕರಣಗಳಲ್ಲಿ ಭಾಗಿಯಾಗದೇ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಕಡೆ ಗಮನ ಹರಿಸಬೇಕು. ಒಂದು ವೇಳೆ ಇಂತಹ ಪ್ರಕರಣದಲ್ಲಿ ಭಾಗಿಯಾದರೆ ಮೊದಲ ಬಾರಿ ಪ್ರಕರಣದಲ್ಲಿ ಆರೋಪಿತರಿಗೆ 05 ವರ್ಷ, ಎರಡನೇ ಬಾರಿಯ ಪ್ರಕರಣPಕ್ಕೆ 7 ರಿಂದ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ. ಅರಣ್ಯ ಇಲಾಖೆಯು ಇಂತಹ ಶ್ರೀಗಂಧ ಮರಗಳ ಕಳ್ಳತನ ಪ್ರಕರಣದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಬದ್ಧವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಅರಣ್ಯ ಇಲಾಖೆಯಿಂದ ಜಿಲ್ಲೆಯಲ್ಲಿ 15 ಲಕ್ಷ ಸಸಿ ನೆಡುವ ಗುರಿ ಇದ್ದು, ಈಗಾಗಲೇ 9 ಲಕ್ಷ ಸಸಿಗಳನ್ನು ನೆಡಲಾಗಿದ್ದು ಬರುವ ಆಗಸ್ಟವರೆಗೆ ಪೂರ್ಣ ಸಸಿಗಳನ್ನು ನೆಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿಪಿಐ ಗುರುಪಾದ ಎಸ್.ಬಿರಾದಾರ, ಪಿ.ಎಸ್.ಐ.ಗಳಾದ ತಸ್ಲಿಂ ಸುಲ್ತಾನಾ, ಕಿರಣ, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

sharadghante

Leave a Reply