1
1

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (KBADA) ಸತತ ಪ್ರಯತ್ನ ಮತ್ತು ಕರ್ನಾಟಕ ಸರ್ಕಾರದ ಒತ್ತಡಕ್ಕೆ ಕೊನೆಗೂ ಫಲ ಸಿಕ್ಕಿದೆ. ಗಡಿಭಾಗದ ಕನ್ನಡ ಮಾಧ್ಯಮ ಶಾಲೆಗಳಲ್ಲಿ 135 ಕನ್ನಡ ಶಿಕ್ಷಕರನ್ನು ನೇಮಿಸಲು ಮಹಾರಾಷ್ಟ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕನ್ನಡ ಕಲಿಸಲು ಮರಾಠಿ ಮಾತನಾಡುವ ಶಿಕ್ಷಕರನ್ನು ನೇಮಿಸಬಾರದು ಎ೦ಬ ಮನವಿಯನ್ನು ಪುರಸ್ಕರಿಸಲಾಗಿದ್ದು, ಇನ್ಮುಂದೆ ಕನ್ನಡ ಬಲ್ಲವರೇ ಮೇಷ್ಟ್ರುಗಳಾಗಿ ಬರಲಿದ್ದಾರೆ. ಗಡಿಭಾಗ ದಲ್ಲಿ ಕನ್ನಡ ಉಳಿಸುವ ನಿಟ್ಟಿನಲ್ಲಿ ಇದೊ೦ದು ಮಹತ್ವದ ಹೆಜ್ಜೆ!
Subscribe to get the latest posts sent to your email.