1
1

ಬೀದರ್ : ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ನಾಸೇರ್ ಖಾನ್ ಇವರನ್ನು ಕೆರಳ ರಾಜ್ಯ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಷ್ಟ್ರೀಯ ಅಧ್ಯಕ್ಷರಾದ ಇಮ್ರಾನ್ ಪ್ರತಾಪಗಡಿ ಅವರು ನೇಮಕ ಮಾಡಿ ನೇಮಕಾತಿ ಪತ್ರ ನೀಡಿ ಅಭಿನಂದಿಸಿ ಕೂಡಲೆ ಪಕ್ಷದ ಸಂಘಟನೆಯಲ್ಲಿ ಕಾರ್ಯಪ್ರವತರಾಗಬೇಕೆಂದು ತಿಳಿಸಿದ್ದಾರೆ.
ಕೆರಳ ರಾಜ್ಯ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ನೇಮಕ ಮಾಡಿದಕ್ಕೆ ಇಮ್ರಾನ್ ಪ್ರತಾಪಗಡಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು, ರಾಜ್ಯದ ನಾಯಕರಿಗೆ ನಾಸೇರ್ ಖಾನ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
Subscribe to get the latest posts sent to your email.