1
1

ಈ ಕುರಿತು ಜಿಲ್ಲಾ ಅಧ್ಯಕ್ಷರಾದ ಸುಭಾಷ್ ಕೆನಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಉಪಾಧ್ಯಕ್ಷರಾದ ಡಾ. ರವಿಸ್ವಾಮಿ ನಿರ್ಣ ಅವರ ಆದೇಶದ ಮೇರೆಗೆ ಈ ನೇಮಕಾತಿ ಜರುಗಿದ್ದು, ಸಂಘಟನೆಯ ಚಟುವಟಿಕೆಗಳನ್ನು ವಿಸ್ತರಿಸುವಲ್ಲಿ ಶಿವಲೀಲಾ ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ ನಾಡು–ನುಡಿ, ನೆಲ–ಜಲಕ್ಕಾಗಿ ಹೋರಾಟವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವ ನಿಟ್ಟಿನಲ್ಲಿ ಈ ನೇಮಕಾತಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಅವರು ಸಂಘಟನೆಯ ಉದ್ದೇಶಗಳನ್ನು ಜನರಿಗೆ ತಲುಪಿಸುವಲ್ಲಿ ಹಾಗೂ ಮಹಿಳಾ ವಿಭಾಗವನ್ನು ಬಲಪಡಿಸುವಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷರು ತಿಳಿಸಿದ್ದಾರೆ.